Saturday, October 9, 2010

ಜನುಮ ಜೋಡಿ ಆದರು ಏಕೆ ಅಂತರ, ಮಧುರ ಗೀತೆ ಕೂಡ ಹೀಗೇಕೆ ಘೋರ

ಒಂದೇ ಒಂದು ಕಣ್ಣ ಬಿಂದು ಜಾರಿದರೆ ನನ್ನಾಣೆ
ನಿನ್ನ ನೋವ ಜೊತೆ ಎಂದು ನಾನಿರುವೆ ನಿನ್ನಾಣೆ

ರಾತ್ರಿಯ ಬೆನ್ನಿಗೆ ಬೆಳ್ಳನೆ ಹಗಲು
ಚಿಂತೆಯ ಹಿಂದೆಯೆ ಸಂತಸ ಇರಲು
ಒಂದೇ ಒಂದು ಕಣ್ಣ ಬಿಂದು ಜಾರಿದರೆ ನನ್ನಾಣೆ
ಚಿಂತೆಯಲ್ಲಿ ನಿನ್ನ ಮನ ದೂಡಿದರೆ ನನ್ನಾಣೆ
ನೋವಿನ ಬಾಳಿಗೆ ಧೈರ್ಯವೆ ಗೆಳೆಯ
ಪ್ರೇಮದ ಜೋಡಿಗೆ ತಾಕದು ಪ್ರಳಯ

ಒಂದೇ ಒಂದು ಕಣ್ಣ ಬಿಂದು ಜಾರಿದರೆ ನನ್ನಾಣೆ
ನಿನ್ನ ನೋವ ಜೊತೆ ಎಂದು ನಾನಿರುವೆ ನಿನ್ನಾಣೆ

ದಾಹ ನೀಗೊ ಗಂಗೆಯೆ ದಾಹ ಎಂದು ಕುಂತರೆ
ಸುಟ್ಟು ಹಾಕೊ ಬೆಂಕಿಯೆ ತನ್ನ ತಾನೆ ಸುಟ್ಟರೆ
ದಾರಿ ತೊರೊ ನಾಯಕ ಒಂಟಿ ಎಂದುಕೊಂಡರೆ
ಧೈರ್ಯ ಹೇಳೊ ಗುಂಡಿಗೆ ಮೂಕವಾಗಿ ಹೋದರೆ
ಸೂರ್ಯನಿಲ್ಲ ಪೂರ್ವದಲಿ ಚಂದ್ರನಿಲ್ಲ ರಾತ್ರಿಯಲಿ
ದಾರಿ ಇಲ್ಲ ಕಾಡಿನಲ್ಲಿ ಆಸೆ ಇಲ್ಲ ಬಾಳಿನಲಿ
ನಂಬಿಕೆ ತಾಳುವ ಅಂಜಿಕೆ ನೀಗುವ
ಶೋಧನೆ ಸಮಯ ಚಿಂತಿಸಿ ಗೆಲ್ಲುವ

ಒಂದೇ ಒಂದು ಕಣ್ಣ ಬಿಂದು ಜಾರಿದರೆ ನನ್ನಾಣೆ
ನಿನ್ನ ನೋವ ಜೊತೆ ಎಂದು ನಾನಿರುವೆ ನಿನ್ನಾಣೆ

ಮೂಡಣದಿ ಮೂಡಿ ಬಾ ಸಿಂಧೂರವೆ ಆಗಿ ಬಾ
ಜೀವಧಾರೆ ಆಗಿ ಬಾ ಪ್ರೇಮಪುಷ್ಪ ಸೇರು ಬಾ
ಬಾನಗಲ ತುಂಬಿ ಬಾ ಆಸೆಗಳ ತುಂಬು ಬಾ
ಸಿಂಗಾರವೆ ತೇಲಿ ಬಾ ಸಂತೋಷವ ನೀಡು ಬಾ
ಪ್ರೇಮದಾಸೆ ನನ್ನ ನಿನ್ನ ಬಂಧಿಸಿದೆ ನನ್ನಾಣೆ
ಸಂತಸದ ಕಣ್ಣ ರೆಪ್ಪೆ ಸಂಧಿಸಿದೆ ನನ್ನಾಣೆ

ದೇವರ ಗುಡಿಗು ಬಿನ್ನಗಳಿರಲು
ಬಾಳಿನ ನಡೆಗು ಅಡ್ಡಿಗಳಿರಲು
ಭೂಮಿಯಾಗಿ ನಾನಿರುವೆ ಚಿಂತೆ ಬೇಡ ನನ್ನಾಣೆ
ನಿನ್ನ ನೋವ ಮೆರುಗಿರಿಯ ನಾ ಹೊರುವೆ ನಿನ್ನಾಣೆ

ಒಂದೇ ಒಂದು ಕಣ್ಣ ಬಿಂದು ಜಾರಿದರೆ ನನ್ನಾಣೆ
ನಿನ್ನ ನೋವ ಜೊತೆ ಎಂದು ನಾನಿರುವೆ ನಿನ್ನಾಣೆ

No comments:

Post a Comment